🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃
*ದೃಷ್ಟಿಪೂತಂ ನ್ಯಸೇತ್ ಪಾದಂ”*
(ಕಾಲಿಡುವಲ್ಲಿ ಮೊದಲು ಕಣ್ಣಿಡು)
ಕಾಲುಗಳ ಪಥದಲ್ಲಿ ಕಲ್ಲು-ಮುಳ್ಳುಗಳಿರಬಹುದು,
ಹಳ್ಳ-ದಿಣ್ಣೆಗಳಿರಬಹುದು, ಕವಲುದಾರಿಗಳಿರಬಹುದು.
ಆದುದರಿಂದ, ಕಾಲು ಸಂಚರಿಸಬೇಕಾದ ಪ್ರದೇಶವನ್ನು ಕಣ್ಣು ಮೊದಲು ಪರೀಕ್ಷಿಸಿ – “Tested OK“ಎಂದು certify ಮಾಡಿದ ಮೇಲೆ ತಾನೇ ಹೆಜ್ಜೆಯಿಡಬೇಕಾದದ್ದು..!
ಈ ಮಾತುಗಳು ಜೀವನ ಪಥದಲ್ಲಿಡುವ ಹೆಜ್ಜೆಗಳಿಗೂ ಅನ್ವಯವಾಗುತ್ತವೆ..😊😊
-ಶ್ರೀಶ್ರೀಶ್ರೀ ರಾಘವೇಶ್ವರ ಸ್ವಾಮೀಜಿ
No comments:
Post a Comment